ಬಿಸಿಲು ಕಾದು ನೆಲವು ಬರಿದಾಗಿದೆ
ಹಸಿರು ಮೊಳಕೆ ಅಲ್ಲೇ ಕರಗಿದೆ
ಜೀವಸೃಷ್ಟಿ ನೊಂದು ಕೊರಗಿದೆ
ಪುಟ್ಟ ಮನವು ಕರೆದಿದೆ
ಬರಡು ನೆಲದಿ , ಜೀವ ಸೆಲೆಯು ಉಕ್ಕಲಿ
ಬತ್ತಿ ಹೋದ ಮನಸಿನಲ್ಲಿ ಹೂವ ನಗುವು ಚೆಲ್ಲಲಿ
ಅಮೃತಧಾರೆ ನೀಡಲಿ ...
ಪುಟ್ಟ ಜೀವ ಬಯಸಿದೆ
ಜಲವು ನಮಗೆ ಅನ್ನದಾತ
ಜಲವು ನಮಗೆ ಜೀವಕಲ್ಪ
ಜಲವೇ ನಮ್ಮ ಭಾಗ್ಯದಾತ
ಜೀವ ಜಲವ ಆವರಿಸಿದೆ
ಕಾಡು ಕಡಿದು , ನಾಶವಾಯ್ತು ವನದ ತಪ್ಪಲು
ಜೀವ ಕೋಟಿ ಮನದಿ ಶಾಪ ಇಟ್ಟರು
ಮೇಘರಾಜ ಹೆದರಿ ನಭದಿ ಹೊಕ್ಕಲು
ಜಲಕೆ ವಿನಂತಿ ತಲುಪಿದೆ
ವನವ ಬೆಳೆಸಿ , ಜೀವಶಕ್ತಿ ಉಳಿಸಿ
ನಾಶಮಾಡಿ ಕೊರಗದಿರು , ..
...........ಮಾಲಿನಿ ಭಟ್....
mast eddu
ReplyDelete